ಅತ್ಯಾಧುನಿಕ ಅರಿವಳಿಕೆ ಯಂತ್ರ ಉದ್ಘಾಟನೆ

ಅರಕಲಗೂಡು:  ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೊಸದಾಗಿ ಅಳವಡಿಸಿರುವ  ಅರವಳಿಕೆ ಯಂತ್ರವನ್ಮು  ಶನಿವಾರ  ಉದ್ಘಾಟನೆ ನೆರವೇರಿತು. 
ಶಾಸಕ ಎ.ಟಿ. ರಾಮಸ್ವಾಮಿ ಉದ್ಘಾಟಿಸಿ ಮಾತನಾಡಿ, ರೂ 15 ಲಕ್ಷ ವೆಚ್ಚದ ಈ ಅರವಳಿಕೆ ಯಂತ್ರ ಅತ್ಯಾದುನಿಕ ತಾಂತ್ರಿಕತೆ ಹೊಂದಿದೆ. ಶಸ್ತ್ರ ಚಿಕಿತ್ಸೆಗಳಿಗೆ  ಈ ಯಂತ್ರ   ಅತ್ಯಂತ ಸಹಾಯಕವಾಗಿದೆ ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕೆ.ಎಂ.ಸತೀಶ್ ಕುಮಾರ್, ಸಕಲೇಶಪುರ ಉಪ ವಿಭಾಗಾಧಿಕಾರಿ  ಗಿರೀಶ್ ನಂದನ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸ್ವಾಮಿಗೌಡ,  ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ ದೀಪಕ್ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment